ಉದ್ಘಾಟಿಸಿ ಶುಭಕೋರಿದ ಡಾಲಿ ಧನಂಜಯ “ರಾಮಾ ರಾಮಾ ರೇ” ಚಿತ್ರದ ಮೂಲಕ ಮನೆಮಾತಾಗಿರುವ ಸತ್ಯಪ್ರಕಾಶ್, ತಮ್ಮ ಸ್ನೇಹಿತರ ಬಳಗದೊಂದಿಗೆ ಸೇರಿ ಸತ್ಯ ಪಿಕ್ಚರ್ಸ್ ಎಂಬ ಸಂಸ್ಥೆ ಆರಂಭಿಸಿದ್ದರು. ಈಗ ಇದರ ಮುಂದಿನ ಹೆಜ್ಜೆಯಾಗಿ “ಸತ್ಯ ಸಿನಿ Distributions” ಎಂಬ ಸಂಸ್ಥೆ ಆರಂಭಿಸಿದ್ದಾರೆ. ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್, ದೀಪಕ್ ಗಂಗಾಧರ್, ಮಂಜುನಾಥ್. ಡಿ ಹಾಗೂ ಸತ್ಯ ಪಿಕ್ಚರ್ಸ್ ತಂಡದವರು ಈ ಹೊಸ ಪ್ರಯತ್ನಕ್ಕೆ ಸಾಥ್ ನೀಡಿದ್ದಾರೆ. ನಾನು ಇಲ್ಲಿಗೆ “ಜಯನಗರ 4th ಬ್ಲಾಕ್” ಕಿರುಚಿತ್ರದಲ್ಲಿ ಅಭಿನಯಿಸಿದ್ದ ಧನಂಜಯನಾಗಿಯೇ ಬಂದಿದ್ದೀನಿ. […]Read More
ಡಾ.ರಾಜ್ಕುಮಾರ್ ಅವರ ಬೆಟ್ಟದಹುಲಿ, ಹುಲಿ ಹೆಬ್ಬುಲಿ, ನಂತರ ರಾಜಾಹುಲಿ ಹೀಗೆ ಹುಲಿ ಸರಣಿಯಲ್ಲಿ ಮೂಡಿಬಂದ ಎಲ್ಲಾ ಚಿತ್ರಗಳು ಸೂಪರ್ಹಿಟ್ ಆಗಿದ್ದವು, ಈಗ ವಿನಯ್ ರತ್ನಸಿದ್ದಿ ಅವರು ಗಂಡುಲಿ ಎಂಬ ಚಿತ್ರ ಮಾಡಿದ್ದಾರೆ. ಆ ಚಿತ್ರಗಳ ಸಾಲಿಗೆ ಇವರ ಗಂಡುಲಿ ಸಿನಿಮಾ ಕೂಡ ಸೇರುವಂತಾಗಲಿ, ಚಿತ್ರದಲ್ಲಿ ವಿಜಯಪ್ರಕಾಶ್ ಹಾಡಿರುವ ನಿನ್ನ ಓರೆನೋಟ ಹಾಡು ತುಂಬಾ ಚೆನ್ನಾಗಿ ಬಂದಿದೆ. ವಿನಯ್ ನಟ, ನಿರ್ದೇಶಕನಾಗಿ ಏನೋ ಸಾಧನೆ ಮಾಡಲು ಬಂದಿದ್ದಾರೆ. ಅವರಿಗೆ ಒಳ್ಳೇದಾಗಲಿ ಎಂದು ಬಿಗ್ಬಾಸ್ ಖ್ಯಾತಿಯ ಪ್ರಥಮ್ ಹೇಳಿದರು. ಮ್ಯೂಸಿಕ್ಬಾಕ್ಸ್ […]Read More
ಒಂದು ಚಿತ್ರದ ಚಿತ್ರೀಕರಣ ಅಂದುಕೊಂಡ ಹಾಗೆ ಮುಗಿದರೆ, ಅರ್ಧ ಸಿನಿಮಾ ಮುಗಿದ ಹಾಗೆ ಎನ್ನುತ್ತಾರೆ. ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಚಿತ್ರೀಕರಣ ನಿಗದಿಗಿಂತ ಒಂದು ದಿನ ಮುಂಚಿತಾವಾಗಿಯೇ ಮುಗಿದಿದೆ. ಈ ಸಂತಸವನ್ನು ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಾನು ಮೂಲತಃ ಮಂಗಳೂರಿನವನು. ಈಗ ಪುಣೆ ವಾಸಿ. ಹದಿನೆಂಟು ವರ್ಷಗಳ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರಕ್ಕೆ ಕೆಲಸ ಮಾಡಿದ್ದೆ. ಆನಂತರ ಚಿತ್ರರಂಗದಿಂದ ದೂರವಾಗಿದೆ. ಈಗ ಮತ್ತೆ ಬಂದಿದ್ದೀನಿ. ಈ ಚಿತ್ರವನ್ನು ನಿರ್ಮಿಸಿ, […]Read More
ಸೆನ್ಸಾರ್ ಮುಂದೆ “ರಾಜಮಾರ್ತಾಂಡ”. ಚಿರಂಜೀವಿ ಸರ್ಜಾ ಅಭಿನಯದ ಈ ಚಿತ್ರ ಸದ್ಯದಲ್ಲೇ ತೆರೆಗೆ. ಚಿಕ್ಕವಯಸ್ಸಿನಲ್ಲೇ ಕಾಲನ ಕರೆಗೆ ಓಗೊಟ್ಟು ನಮ್ಮನೆಲ್ಲಾ ಅಗಲಿದ ಚಿರಂಜೀವಿ ಸರ್ಜಾ ಅಭಿನಯದ ” ರಾಜಮಾರ್ತಾಂಡ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ತಿಯಾಗಿತ್ತು. ಹಾಗಾಗಿ ಅವರು ಚಿತ್ರೀಕರಣ ಮುಗಿಸಿದ್ದ ಕೊನೆಯ ಚಿತ್ರ ಅನ್ನಬಹುದು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಚಿರು ಅವರ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮಾಡಲಿದ್ದಾರೆ.”ರಾಜಮಾರ್ತಾಂಡ” […]Read More
ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದರು “ವರದ” ಚಿತ್ರದ ಹಾಡು. ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರ ಜನವರಿ 28 ರಂದು ತೆರೆಗೆ. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಯಾರೇ ನೀನು” ಎಂಬ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. ಬಿಡುಗಡೆ ಆದ ಕೆಲವೇ ಕ್ಷಣಗಳಲ್ಲಿ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. “ರಾಬರ್ಟ್” ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಈ […]Read More
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ್ನ ‘ಭಜರಂಗಿ 2’ ಸಿನಿಮಾ ಜೀ5 ಒಟಿಟಿಯಲ್ಲಿ ಕಮಾಲ್ ಮಾಡ್ತಿದೆ. ಈ ಸಿನಿಮಾ ಬೆನ್ನಲ್ಲೇ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ಕನ್ನಡಿಗ’ ಸಿನಿಮಾಗೂ ಒಟಿಟಿಯಲ್ಲಿ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಟನೆಯ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಜೀ5 ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ. ನವೆಂಬರ್ 19ರಂದು ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಥಿಯೇಟರ್ ಗೆ ಎಂಟ್ರಿ ಕೊಟ್ಟಿತ್ತು. […]Read More
ಕನ್ನಡ ಚಿತ್ರರಂಗದಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ ಹಾಗೂ ಶ್ಯಾನೆ ಟಾಪಾಗಿರುವ ನಟಿ ಅದಿತಿ ಪ್ರಭುದೇವ ನಟನೆಯ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 4ರಂದು ಬೆಳ್ಳಿತೆರೆಗೆ ಗಜಾನನ ಗ್ಯಾಂಗ್ ಹುಡ್ಗರು ಎಂಟ್ರಿ ಕೊಡ್ತಿದ್ದಾರೆ. ಸತತ ಎರಡು ವರ್ಷಗಳ ಪರಿಶ್ರಮದ ಕನಸು ಗಜಾನನ ಗ್ಯಾಂಗ್ ಸಿನಿಮಾ ಸ್ಯಾಂಪಲ್ಸ್ ನಲ್ಲೇ ಸದ್ದು ಮಾಡ್ತಿದೆ. ಟ್ರೇಲರ್ ಹಾಗೂ ಸಾಂಗ್ ಮೂಲಕ ಕ್ಯೂರಿಯಾಸಿಟಿ ಹುಟ್ಟಿಸಿರುವ ಗಜಾನನ ಗ್ಯಾಂಗ್ ಸಿನಿಮಾಗೆ ಚಿತ್ರಪ್ರೇಮಿಗಳು ಕುತೂಹಲದಿಂದ ಕಾಯ್ತಿದ್ದಾರೆ. ನಮ್ ಗಣಿ ಬಿಕಾಂ […]Read More