ಕಿಡಿಗೇಡಿಗಳನ್ನು ಹಿಡಿದು ಬಡಿದ ಬಹದ್ದೂರ್ ಗಂಡು ಕಿರಣ್ ರಾಜ್

 ಕಿಡಿಗೇಡಿಗಳನ್ನು ಹಿಡಿದು ಬಡಿದ ಬಹದ್ದೂರ್ ಗಂಡು ಕಿರಣ್ ರಾಜ್

“ಕನ್ನಡತಿ” ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಅಭಿನಯದ “ಬಹದ್ದೂರ್ ಗಂಡು” ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. ಕಿರಣ್ ರಾಜ್ ಹಾಗೂ ಶಬರಿ ಮಂಜು ಅವರ ನಡುವೆ ಈ ಸಾಹಸ ದೃಶ್ಯ ನಡೆಯುತ್ತದೆ. ವಿನೋದ್ ಅವರ ಸಾಹಸ ನಿರ್ದೇಶನದಲ್ಲಿ ಅದ್ದೂರಿ ಯಾಗಿ ಈ ಸನ್ನಿವೇಶ ಮೂಡಿಬಂದಿದೆ.

ನಮ್ಮ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಈ ಸಾಹಸ ಸನ್ನಿವೇಶದಲ್ಲಿ ದೊಣ್ಣೆ ವರಸೆ ಪ್ರಮುಖ ಆಕರ್ಷಣೆ. ಇದಕ್ಕಾಗಿ ನಾಯಕ ಕಿರಣ್ ರಾಜ್ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ ಎಂದು ನಿರ್ದೇಶಕ ಪ್ರಸಿದ್ದ್ ತಿಳಿಸಿದ್ದಾರೆ. ಪ್ರಸಿದ್ದ್ ಸಿನಿಮಾಸ್ ಮತ್ತು ರಮೇಶ್ ರೆಡ್ಡಿ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಿಟ್ಟಿ ಕೌಶಿಕ್ ಛಾಯಾಗ್ರಹಣ, ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ, ವೆಂಕಿ ಯು ಡಿ ವಿ ಸಂಕಲನ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಕಿರಣ್ ರಾಜ್, ಯಶಾ ಶಿವಕುಮಾರ್, ರಮೇಶ್ ಭಟ್, ವೀಣಾ ಸುಂದರ್, ಜಯಶ್ರೀ ರಾಜ್, ರಾಕೇಶ್ ರಾಜ್, ಸುರೇಖ, ನಾಗೇಶ್ ರೋಹಿತ್, ಶಬರಿ ಮಂಜು, ಮಡೆನೂರ್ ಮನು, ಗೋವಿಂದೇ ಗೌಡ, ವಾಣಿ, ರಂಜಿತ್ ಖನ್ನಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

cinibeat