’ಇತ್ಯಾದಿ’ ಚಿತ್ರವು ಸೆನ್ಸಾರ್ಗೆ ಹೋಗಲು ಅಣಿಯಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚರಣ್ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಗ್ ಬಾಸ್ ವಿಜೇತ, ನಟ,ನಿರ್ದೇಶಕ ಪ್ರಥಮ್ ಮಾತನಾಡಿ, ತುಣುಕುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಡಿ.ಯೋಗರಾಜ್ ಅವರಿಗೆ ಯೋಗ ಹುಡುಕಿಕೊಂಡು ಬರಲಿ. ನಿನ್ನೆಯಷ್ಟೇ ವಿಕಟಕವಿ ಯೋಗರಾಜಭಟ್ ಅವರ ಚಿತ್ರದ ಸಮಾರಂಭ ನಡೆದಿದೆ. […]Read More
Tags : sandalwood
ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಜವರ್ಧನ್ ಗೆ ಜೋಡಿಯಾಗಿ ಯುವ ನಟಿ ರಿಹಾನಾ ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿಯಷ್ಟೇ ಬಿಟ್ಟುಕೊಟ್ಟಿದ್ದ ಸಿನಿಬಳಗವೀಗ ನಾಯಕಿ ಪಾತ್ರ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ರಿಹಾನಾ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಅನಾವರಣ ಮಾಡಿದೆ. ಏನನ್ನು ಕಳೆದುಕೊಂಡಂತೆ ಭಾವುಕಳಾಗಿ ನಿಂತಿರುವ […]Read More
‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್ ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ […]Read More
ಸ್ಯಾಂಡಲ್ವುಡ್ಗೆ ಸ್ಮಾರ್ಟ್ ಹುಡುಗನ ಎಂಟ್ರಿ – ರಕ್ತಾಕ್ಷ ಚಿತ್ರದ ನಾಯಕ ಮಾಡೆಲ್ ರೋಹಿತ್
ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ರಕ್ತಾಕ್ಷ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.. ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ದಾಸ್ಮೋಡ […]Read More
ದೂದ್ಪೇಡಾ ದಿಗಂತ್ ಮಿಸ್ಸಿಂಗ್ – ಎಡಗೈ ಅಪಘಾತಕ್ಕೆ ಕಾರಣ ಚಿತ್ರದ ಡಬ್ಬಿಂಗ್ ಶುರು
ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು […]Read More
ಚಂದನವನದಲ್ಲಿ ಹೊಸಬರ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ಜಯಂ’ ಚಿತ್ರವೊಂದು ಸೆಟ್ಟೇರಿದೆ. ಪವರ್ ಆಫ್ ವಿಕ್ಟರಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಮೊನ್ನೆಯಷ್ಟೇ ಮಾಗಡಿ ರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕೆಲಸ ಕಲಿತಿರುವ ಧೀರಜ್ಶೆಟ್ಟಿ ಸಿನಿಮಾಕ್ಕೆ ರಚನೆ,ಚಿತ್ರಕಥೆ, ನಿರ್ದೇಶನ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಆರ್ಮಿ ರಜೆಯಲ್ಲಿದ್ದು, […]Read More
“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನವೀನ್ ಶಂಕರ್ ಅವರಿಗೆ “ಕ್ಷೇತ್ರಪತಿ” ತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ […]Read More
ಅಗ್ರಸೇನಾ ಟೀಸರ್ ಅಬ್ಬರ – ಮುರುಗೇಶ್ ನಿರ್ದೇಶನದ ಫ್ಯಾಮಿಲಿ ಡ್ರಾಮಾ
ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ ‘ಅಗ್ರಸೇನಾ’ ಚಿತ್ರವೀಗ ಬಿಡುಗಡೆಯ ಸನಿಹಕ್ಕೆ ಬಂದಿದೆ. ಜೂನ್ ೨೩ಕ್ಕೆ ರಿಲೀಸಾಗಲು ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವೀಡಿಯೋ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಮರ್ ವಿರಾಜ್ ಹಾಗೂ ರಚನಾ ದಶರಥ್ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ, ಹಿರಿಯನಟ ರಾಮಕೃಷ್ಣ ಅವರು ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದು ಅವರ ೨೦೦ನೇ ಚಿತ್ರ ಎನ್ನುವುದು […]Read More
ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು. […]Read More
ಐರಾ ಎನ್ನುವುದು ಸಂಸ್ಕೃತ ಪದ, ಪ್ರಕೃತಿಯಲ್ಲಿ ಏನಾದರೂ ಒಂದು ಕ್ರಿಯೆ ನಡೆಯುವ ಮುನ್ನ ವಿಚಿತ್ರ ಶಬ್ದವೊಂದು ಕೇಳಿಬರುತ್ತದೆ. ಆ ಶಬ್ದವನ್ನೇ ಐರಾ ಎನ್ನುತ್ತೇವೆ. ಇದು ನಿರ್ದೇಶಕ ರಾಜ್ಉದಯ್ ಟೈಟಲ್ ಕುರಿತು ನೀಡಿರುವ ಮಾಹಿತಿ. Read More